ಮಜಾವಾಣಿ: ರಾಜಕೀಯ ಸುದ್ದಿ
"ರಾಜ್ಯದ ಹಿತ ರಕ್ಷಣೆಗಾಗಿ ಮತ್ತೆ ಮತ್ತೆ ಮೋಸಹೋಗಲು ಸಿದ್ಧ" - ಯಡ್ಡಿ
ಶಿರಾಳ ಕೊಪ್ಪ, ಡಿಸೆಂಬರ್ ೧: ರಾಜ್ಯದ ಜನರ ಹಿತಾಸಕ್ತಿಗಾಗಿ ತಾವು ಮತ್ತೆ ಮತ್ತೆ ಮೋಸಹೋಗಲು ಸಿದ್ಧವಿರುವುದಾಗಿ ಮಾಜಿ ಮುಖ್ಯಮಂತ್ರಿ ಯೆಡ್ಯೂರಪ್ಪ ಘೋಷಿಸಿದ್ದಾರೆ.
ನಗರದ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, "ಮೋಸ ಹೋಗುವುದು ನನಗೆ ಹೊಸದೇನೂ ಅಲ್ಲ. ಚಿಕ್ಕಂದಿನಿಂದ ಅದರ ಅನುಭವವಿದೆ. ಶಾಲೆಯಲ್ಲಿದ್ದಾಗ, ಪೆಪ್ಪರ್ ಮಿಂಟ್ ಆಸೆ ತೋರಿಸಿ ನನ್ನಿಂದ ಎಷ್ಟೋ ಜನ ಬಳಪ, ಪೆನ್ಸಿಲ್ ತೆಗೆದುಕೊಳ್ಳುತ್ತಿದ್ದರು. ಅದೂ ಒಂದಲ್ಲ, ಹತ್ತಾರು ಸಾರಿ. ಈಗ ರಾಜ್ಯದ ಜನರ ಹಿತ ರಕ್ಷಣೆಗಾಗಿ ಮುಖ್ಯಮಂತ್ರಿಯ ಪದವಿಯ ಆಸೆ ತೋರಿಸಿದಲ್ಲಿ ಎಂತಹ ಮೋಸ, ವಿಶ್ವಾಸ ದ್ರೋಹಕ್ಕೆ ಒಳಗಾಗಲೂ ನಾನು ಸಿದ್ಧ" ಎಂದರು.
ವಿಧಾನ ಸಭಾ ಚುನಾವಣೆಯ ನಂತರ ಅಗತ್ಯವಾದಲ್ಲಿ ಮತ್ತೊಮ್ಮೆ ವಿಶ್ವಾಸ ದ್ರೋಹಕ್ಕೆ ಒಳಗಾಗಲು ಬಿ.ಜೆ.ಪಿ. ಪೂರ್ಣ ಸಿದ್ಧತೆಯನ್ನು ನಡೆಸಿದೆ ಎನ್ನಲಾಗಿದ್ದು, ಅದರಿಂದ ದೊರಕಬಹುದಾದ ಅನುಕಂಪದ ಅಲೆಯ ನಿರೀಕ್ಷೆಯಲ್ಲಿದೆ ಎನ್ನಲಾಗಿದೆ.
(ಮಜಾವಾಣಿ ಬ್ಯೂರೋ ವರದಿ)
ಶಿರಾಳ ಕೊಪ್ಪ, ಡಿಸೆಂಬರ್ ೧: ರಾಜ್ಯದ ಜನರ ಹಿತಾಸಕ್ತಿಗಾಗಿ ತಾವು ಮತ್ತೆ ಮತ್ತೆ ಮೋಸಹೋಗಲು ಸಿದ್ಧವಿರುವುದಾಗಿ ಮಾಜಿ ಮುಖ್ಯಮಂತ್ರಿ ಯೆಡ್ಯೂರಪ್ಪ ಘೋಷಿಸಿದ್ದಾರೆ.
ನಗರದ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, "ಮೋಸ ಹೋಗುವುದು ನನಗೆ ಹೊಸದೇನೂ ಅಲ್ಲ. ಚಿಕ್ಕಂದಿನಿಂದ ಅದರ ಅನುಭವವಿದೆ. ಶಾಲೆಯಲ್ಲಿದ್ದಾಗ, ಪೆಪ್ಪರ್ ಮಿಂಟ್ ಆಸೆ ತೋರಿಸಿ ನನ್ನಿಂದ ಎಷ್ಟೋ ಜನ ಬಳಪ, ಪೆನ್ಸಿಲ್ ತೆಗೆದುಕೊಳ್ಳುತ್ತಿದ್ದರು. ಅದೂ ಒಂದಲ್ಲ, ಹತ್ತಾರು ಸಾರಿ. ಈಗ ರಾಜ್ಯದ ಜನರ ಹಿತ ರಕ್ಷಣೆಗಾಗಿ ಮುಖ್ಯಮಂತ್ರಿಯ ಪದವಿಯ ಆಸೆ ತೋರಿಸಿದಲ್ಲಿ ಎಂತಹ ಮೋಸ, ವಿಶ್ವಾಸ ದ್ರೋಹಕ್ಕೆ ಒಳಗಾಗಲೂ ನಾನು ಸಿದ್ಧ" ಎಂದರು.
ವಿಧಾನ ಸಭಾ ಚುನಾವಣೆಯ ನಂತರ ಅಗತ್ಯವಾದಲ್ಲಿ ಮತ್ತೊಮ್ಮೆ ವಿಶ್ವಾಸ ದ್ರೋಹಕ್ಕೆ ಒಳಗಾಗಲು ಬಿ.ಜೆ.ಪಿ. ಪೂರ್ಣ ಸಿದ್ಧತೆಯನ್ನು ನಡೆಸಿದೆ ಎನ್ನಲಾಗಿದ್ದು, ಅದರಿಂದ ದೊರಕಬಹುದಾದ ಅನುಕಂಪದ ಅಲೆಯ ನಿರೀಕ್ಷೆಯಲ್ಲಿದೆ ಎನ್ನಲಾಗಿದೆ.
(ಮಜಾವಾಣಿ ಬ್ಯೂರೋ ವರದಿ)
Labels: ರಾಜಕೀಯ


8 Comments:
ಉತ್ತಮ ಸುದ್ದಿಯನ್ನು ತಿಳಿಸಿರುವ ನಿಮಗೆ ಅನಂತಾನಂತ ಧನ್ಯವಾದಗಳು ಸರ್..
ಎಷ್ಟೊಂದು ಮುಕ್ತ ಪತ್ರಿಕೆ. ಯಾವ ಪತ್ರಿಕೆಯೂ ಪ್ರಕಟಿಸಿರದ ಸುದ್ದಿಯನ್ನು ಪ್ರಕಟಿಸಲು ಮಜಾವಾಣಿ ಪತ್ರಿಕೆ ಹಿಂದೇಟು ಹಾಕುತ್ತಿಲ್ಲ. :):)
ವಿ.ವಿ.,
ಯಾಕ್ರಿ? ಯಾಕ್ ಏನೂ ಬರೀತಿಲ್ಲ? ಓದುಗ ದೊರೆಗಳು ಕ್ರುದ್ಧರಾಗಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಮುನ್ನ ಕಾರ್ಯಪ್ರವೃತ್ತರಾಗಿ :-)
This post has been removed by the author.
ನಗುವು ಸಹಜದ ಧರ್ಮ
ನಗಿಸುವುದು ಪರ ಧರ್ಮ
ನಗುವ ನಗಿಸುತ ನಗಿಸಿ
ನಗುತ ಬಾಳುವ ವರವ
ಮಿಗೆ ನೀನು ಬೇಡಿಕೊಳೊ ಮಂಕುತಿಮ್ಮ-
ಎಂದವರು ಡಿ.ವಿ.ಜಿ. ಜೀವನವನ್ನು ನೋಡುವ ದೃಷ್ಟಿಯಲ್ಲಿ ನವಿರಾದ ಹಾಸ್ಯವನ್ನು ಬೆರೆಸಿಕೊಂಡು ಬಿಟ್ಟರೆ ಯಾವ ಕಷ್ಟಗಳೂ ನಮ್ಮನ್ನು ಕುಗ್ಗಿಸುವುದಿಲ್ಲ, ಅವಮಾನಗಳು ನಮ್ಮನ್ನು ನಿರ್ನಾಮ ಮಾಡುವುದಿಲ್ಲ. ಹಾಸ್ಯ ಶಾಕ್ ಅಬ್ಸಾರ್ವರ್ನಂತೆ ಆಘಾತಗಳನ್ನು ತಾಳಿಕೊಳ್ಳಬಲ್ಲ ಶಕ್ತಿಯನ್ನು ಕೊಡುತ್ತದೆ.
ಕನ್ನಡದಲ್ಲಿ ವೈವಿಧ್ಯಮಯ ಹಾಸ್ಯಕ್ಕಾಗಿ ಮೀಸಲಾದ ಬ್ಲಾಗ್ ‘ನಗೆ ನಗಾರಿ ಡಾಟ್ ಕಾಮ್’.
ವಿಳಾಸ: http://nagenagaaridotcom.wordpress.com/
ದಯವಿಟ್ಟು ಒಮ್ಮೆ ಇಲ್ಲಿ ಭೇಟಿಕೊಡಿ. ನಿಮ್ಮ ಮುಖದ ಮೇಲೆ ತೆಳುನಗೆಯ ಗೆರೆ ಮೂಡದಿದ್ದರೆ ಕೇಳಿ. ಇಷ್ಟವಾದರೆ ನಿಮ್ಮ ಬ್ಲಾಗ್ ಫೀಡಿನಲ್ಲಿ ಇದನ್ನು ಸೇರಿಸಿಕೊಳ್ಳಿ, ಮೆಚ್ಚುಗೆಯಾದರೆ ನಿಮ್ಮ ಇತರೆ ಗೆಳೆಯ, ಗೆಳತಿಯರಿಗೆ ಇದರ ಬಗ್ಗೆ ತಿಳಿಸಿ.
ನಗೆ ಸಾಮ್ರಾಟ್
ನಗುವು ಸಹಜದ ಧರ್ಮ
ನಗಿಸುವುದು ಪರ ಧರ್ಮ
ನಗುವ ನಗಿಸುತ ನಗಿಸಿ
ನಗುತ ಬಾಳುವ ವರವ
ಮಿಗೆ ನೀನು ಬೇಡಿಕೊಳೊ ಮಂಕುತಿಮ್ಮ-
ಎಂದವರು ಡಿ.ವಿ.ಜಿ. ಜೀವನವನ್ನು ನೋಡುವ ದೃಷ್ಟಿಯಲ್ಲಿ ನವಿರಾದ ಹಾಸ್ಯವನ್ನು ಬೆರೆಸಿಕೊಂಡು ಬಿಟ್ಟರೆ ಯಾವ ಕಷ್ಟಗಳೂ ನಮ್ಮನ್ನು ಕುಗ್ಗಿಸುವುದಿಲ್ಲ, ಅವಮಾನಗಳು ನಮ್ಮನ್ನು ನಿರ್ನಾಮ ಮಾಡುವುದಿಲ್ಲ. ಹಾಸ್ಯ ಶಾಕ್ ಅಬ್ಸಾರ್ವರ್ನಂತೆ ಆಘಾತಗಳನ್ನು ತಾಳಿಕೊಳ್ಳಬಲ್ಲ ಶಕ್ತಿಯನ್ನು ಕೊಡುತ್ತದೆ.
ಕನ್ನಡದಲ್ಲಿ ವೈವಿಧ್ಯಮಯ ಹಾಸ್ಯಕ್ಕಾಗಿ ಮೀಸಲಾದ ಬ್ಲಾಗ್ ‘ನಗೆ ನಗಾರಿ ಡಾಟ್ ಕಾಮ್’.
ವಿಳಾಸ: http://nagenagaaridotcom.wordpress.com/
ದಯವಿಟ್ಟು ಒಮ್ಮೆ ಇಲ್ಲಿ ಭೇಟಿಕೊಡಿ. ನಿಮ್ಮ ಮುಖದ ಮೇಲೆ ತೆಳುನಗೆಯ ಗೆರೆ ಮೂಡದಿದ್ದರೆ ಕೇಳಿ. ಇಷ್ಟವಾದರೆ ನಿಮ್ಮ ಬ್ಲಾಗ್ ಫೀಡಿನಲ್ಲಿ ಇದನ್ನು ಸೇರಿಸಿಕೊಳ್ಳಿ, ಮೆಚ್ಚುಗೆಯಾದರೆ ನಿಮ್ಮ ಇತರೆ ಗೆಳೆಯ, ಗೆಳತಿಯರಿಗೆ ಇದರ ಬಗ್ಗೆ ತಿಳಿಸಿ.
ನಗೆ ಸಾಮ್ರಾಟ್
ಎಂಥ ಮಾರಾಯ್ರೆ..ಸುದ್ದಿಗಳಿಗೆ ಕೊರತೆಯಾಗುತ್ತಿದೆ..ಸಂಪಾದಕರಿಗೆ ಆರೋಗ್ಯವೇನಾದ್ರ...
ವಾರ್ತಾ ವಿದೂಷಕರಿಗೆ ನಮಸ್ಕಾರ.
ಹೇಗಿದ್ದೀರಿ?
ನಿಮ್ಗೆ ತಿಳಿದಿರೋ ಹಾಗೆ, ನಾವೆಲ್ಲ ಎಷ್ಟೋ ಕಾಲದಿಂದ ಅಂತರ್ಜಾಲದಲ್ಲಿ ಬರೀತಿದೀವಿ, ಓದ್ತಿದೀವಿ, ಪ್ರತಿಕ್ರಿಯಿಸಿಕೊಳ್ತಿದೀವಿ, ಮೇಲ್-ಸ್ಕ್ರಾಪ್-ಚಾಟ್ ಮಾಡ್ಕೊಳ್ತಿದೀವಿ.. ಆದ್ರೆ ನಮ್ಮಲ್ಲಿ ಬಹಳಷ್ಟು ಜನ ಪರಸ್ಪರ ಪರಿಚಯ ಮಾಡಿಕೊಂಡಿಲ್ಲ, ಮುಖತಃ ಭೇಟಿ ಆಗಿಲ್ಲ. ಇರಾದೆ ಇದ್ರೂ ಅದು ಸಾಧ್ಯ ಆಗಿಲ್ಲ!
ಇಂತಿದ್ದಾಗ, ನವ ಪ್ರಕಾಶನ ಸಂಸ್ಥೆ ’ಪ್ರಣತಿ’, ಅಂತರ್ಜಾಲದಲ್ಲಿ ಕನ್ನಡ ಬಳಸುವ ಮತ್ತು ಓದುವ ಎಲ್ಲರನ್ನು ಒಂದೆಡೆ ಸೇರಿಸುವ ಈ ಕಾರ್ಯಕ್ಕೆ ಮುಂದಾಗಿದೆ. ನಾಡಿದ್ದು ಭಾನುವಾರ ನಾವೆಲ್ಲ ಪರಸ್ಪರ ಭೇಟಿಯಾಗುವ ಅವಕಾಶ ಒದಗಿ ಬಂದಿದೆ.
ಡೇಟು: ೧೬ ಮಾರ್ಚ್ ೨೦೦೮
ಟೈಮು: ಇಳಿಸಂಜೆ ನಾಲ್ಕು
ಪ್ಲೇಸು: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಸವನಗುಡಿ, ಬೆಂಗಳೂರು
ಆವತ್ತು ನಮ್ಮೊಂದಿಗೆ, ಕನ್ನಡದ ಮೊದಲ ಅಂತರ್ಜಾಲ ತಾಣದ ರೂವಾರಿ ಡಾ| ಯು.ಬಿ. ಪವನಜ, ’ದಟ್ಸ್ ಕನ್ನಡ’ದ ಸಂಪಾದಕ ಎಸ್.ಕೆ. ಶ್ಯಾಮಸುಂದರ್, ’ಸಂಪದ’ದ ಹರಿಪ್ರಸಾದ್ ನಾಡಿಗ್, ’ಕೆಂಡಸಂಪಿಗೆ’ಯ ಅಬ್ದುಲ್ ರಶೀದ್ ಸಹ ಇರ್ತಾರೆ, ಮಾತಾಡ್ತಾರೆ.
ಎಲ್ಲರೊಂದಿಗೆ ಒಂದು ಸಂಜೆ ಕಳೆಯುವ ಖುಶಿಗೆ ನೀವೂ ಪಾಲುದಾರರಾಗಿ ಅಂತ, ’ಪ್ರಣತಿ’ಯ ಪರವಾಗಿ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇನೆ. ಈ ಕಾರ್ಯಕ್ರಮದ ಬಗ್ಗೆ ನಿಮ್ಮ ಸ್ನೇಹಿತರಿಗೂ ತಿಳಿಸಿ. ಅವರನ್ನೂ ಕರೆದುಕೊಂಡು ಬನ್ನಿ.
ಅಲ್ಲಿ ಸಿಗೋಣ,
ಇಂತಿ,
ಸುಶ್ರುತ ದೊಡ್ಡೇರಿ
Post a Comment
Links to this post:
Create a Link
<< Home