ಮಜಾವಾಣಿ

ಎಲ್ಲಿ ಬೇಲಿಗಿಲ್ಲವೋ ಅರಿವು, ಎಲ್ಲಿ ಗಾಳಿಗಿಲ್ಲವೋ ಭಯವು, ಎಲ್ಲಿಲ್ಲವೋ ಸತ್ಯದ ಸುಳಿವು...

Monday, March 31, 2008

ಮಜಾವಾಣಿ: ರಾಜಕೀಯ ಸುದ್ದಿ

ಎಸ್.ಎಂ.ಕೃಷ್ಣ ಹೃದಯಕ್ಕೆ ಪ್ರತ್ಯೇಕ ಪೋಸ್ಟಲ್ ಕೋಡ್ ನೀಡುವಂತೆ ಆಗ್ರಹ
ಬೆಂಗಳೂರು, ಏಪ್ರಿಲ್ ೧: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಿಯೋಗವೊಂದು ನಗರದ ಪೋಸ್ಟ್ ಮಾಸ್ಟರ ಜನರಲ್ ಅವರನ್ನು ಭೇಟಿ ಮಾಡಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರವರ ಹೃದಯಕ್ಕೆ ಪ್ರತ್ಯೇಕ ಪೋಸ್ಟಲ್ ಕೋಡ್ ನೀಡುವಂತೆ ಆಗ್ರಹಿಸಿತು.

ತಮ್ಮ ಬೇಡಿಕೆಯನ್ನು ಮಂಡಿಸಿದ ನಂತರ ನಮ್ಮ ಪತ್ರಿಕೆಯೊಂದಿಗೆ ಮಾತನಾಡಿದ ಡಿ.ಕೆ.ಶಿ.ಯವರು, "ಜನರೇ ಇಲ್ಲದ ಎಂತೆಂತಹ ಸಣ್ಣ ಸಣ್ಣ ಹಳ್ಳಿಗಳಿಗೂ ಈಗ ಪ್ರತ್ಯೇಕ ಪೋಸ್ಟಲ್ ಕೋಡ್ ಇದೆ. ಹಾಗಿರುವಾಗ ಇಡೀ ಕರ್ನಾಟಕದ ಜನತೆಯನ್ನೇ ತಮ್ಮೆದೆಯಲ್ಲಿ ತುಂಬಿಸಿಕೊಂಡಿರುವ ಕೃಷ್ಣರವರ ವಿಶಾಲ ಹೃದಯಕ್ಕೆ ತನ್ನದೇ ಆದ ಪೋಸ್ಟಲ್ ಕೋಡ್ ಇಲ್ಲದಿರುವುದು ಖಂಡನೀಯ" ಎಂದರು.

Labels:

0 Comments:

Post a Comment

Links to this post:

Create a Link

<< Home